ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆಯ ಅಬ್ಬರ: ಬಿಸಿಲ ಬೇಗೆಗೆ ತಂಪೆರೆದ ವರುಣ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದೆ. ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನ್ ಸಿಟಿ ಸುತ್ತಮುತ್ತ ಇಂದು ಮಳೆಯಾಗಿದ್ದು, ಬಿಸಿಲ ಬೇಗೆಗೆ ಕಾದಿದ್ದವರು ಫುಲ್ ಕೂಲ್ ಆಗಿದ್ದಾರೆ.

ನಗರದ ಹಲವೆಡೆ ಇಂದು ಸಂಜೆ ಮುಂಗಾರು ಪೂರ್ವ ಮಳೆಯಾಗಿದ್ದು, ರಸ್ತೆಯಲ್ಲಿ ಸಿಲುಕಿದ್ದ ವಾಹನ ಸವಾರರು ಪರದಾಡುವ ದೃಶ್ಯ ಕಂಡು ಬಂದಿದೆ.

ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಬೆಂಗಳೂರಲ್ಲಿ ಮುಂದಿನ ಕೆಲವು ದಿನಗಳು ವರುಣನ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಏಪ್ರಿಲ್ 24, 25ರಂದು ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನು ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದ ಒಂದು ಅಥವಾ 2 ಕಡೆ ಗುಡುಗು ಸಹಿತ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!