ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಭೀಕರ ಅಪಘಾತ ಮಾಸುವ ಮುನ್ನ ಮತ್ತೊಂದು ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಹಾರ್ದಿಕ್ ಮೃತ ಬಾಲಕ. ಬಾಲಕನ ತಾಯಿ ಸ್ವಾತಿ ಗಂಭೀರ ಗಾಯಗೊಂಡಿದ್ದಾರೆ.
ಸ್ವಾತಿ ತಮ್ಮ ಮಗ ಹಾರ್ದಿಕ್ನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ನಗರದ ಬೆಂದೂರ್ವೆಲ್ ಬಳಿ ಖಾಸಗಿ ಬಸ್ವೊಂದು ಓವರ್ಟೇಕ್ ಮಾಡುವ ಭರದಲ್ಲಿ ಇನ್ನೊಂದು ಬಸ್ಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ ದ್ವಿಚಕ್ರ ವಾಹನಕ್ಕೆ ತಾಗಿ ತಾಯಿ ಮತ್ತು ಮಗ ಕೆಳಕ್ಕೆ ಬಿದ್ದಿದ್ದಾರೆ. ಬಾಲಕ ಬಸ್ನ ಚಕ್ರದಡಿಗೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬಾಲಕ ನಗರದ ಅಟೊಮೊಬೈಲ್ ಮಳಿಗೆಯೊಂದರ ಮಾಲಕರ ಪುತ್ರ.