ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮಿತಿಮೀರಿದೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಎಂಇಎಸ್ ಪುಂಡರು ದಾಳಿ ನಡೆಸಿದ್ದಾರೆ. ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.
ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.
ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ’ ಎಂದು ಹಲ್ಲೆಕೋರರು ಧಮ್ಕಿ ಹಾಕಿ ಹಲ್ಲೆ ಮಾಡಿದ್ದಾರೆ. ನಾಗಪ್ಪ ಅವರನ್ನು ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.