ನಟ ದರ್ಶನ್ ಗೆ ಮತ್ತೊಂದು ರಿಲೀಫ್: ಮೈಸೂರಿನಲ್ಲಿರಲು ಅನುಮತಿ ನೀಡಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೈಸೂರಿನಲ್ಲಿರುವ ನಟ ದರ್ಶನ್ ಗೆ ಕೋರ್ಟ್ ಮತ್ತೊಂದು ರಿಲೀಫ್ ನೀಡಿದ್ದು, ಫೆ. 10 ರವರೆಗೆ ಮೈಸೂರಿನಲ್ಲಿರಲು ಕೋರ್ಟ್ ಅನುಮತಿ ನೀಡಿದೆ.

ಮೈಸೂರಿನಲ್ಲಿ ಇರಲು ಅನುಮತಿ ಕೋರಿ ನಟ ದರ್ಶನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ಕೋರ್ಟ್, ಫೆ.10ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ವೈದ್ಯರ ಸಮಾಲೋಚನೆ, ಫಾರ್ಮ್ ಹೌಸ್ ಹಾಗೂ ತಾಯಿ ಭೇಟಿ ಕಾರಣಗಳಿಗಾಗಿ ನಟ ದರ್ಶನ್ ಗೆ ಫೆ.10ರವರೆಗೆ ಮೈಸೂರಿನಲ್ಲಿರಲು ಅನುಮತಿ ನೀಡಲಾಗಿದ್ದು, ಈ ಮೂಲಕ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನಟ ದರ್ಶನ್ 3 ನೇ ಬಾರಿಗೆ ಮೈಸೂರಿನಲ್ಲಿ ಇರಲು ಅನುಮತಿ ಸಿಕ್ಕಂತಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!