ಸಿಎಂ ಸಿದ್ದರಾಮಯ್ಯ ಗೆ ಮತ್ತೊಂದು ಶಾಕ್: ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಡಾ ಅಕ್ರಮ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ.

ನಾಗರಭಾವಿ ನಿವಾಸಿಯಾದ ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಶನಿವಾರ ಈ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನಾದರೂ, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಕೇವಿಯೆಟ್ ಅರ್ಜಿದಾರರು ಕೋರಿದ್ದಾರೆ.

ಹೈಕೋರ್ಟ್ ವಕೀಲ ಎಂ.ಎಚ್.ಪ್ರಕಾಶ್ ವಕಾಲತ್ತು ವಹಿಸಿದ್ದಾರೆ ಎಂದು ತಿಳಿದುಬಂದಿದೆ.

‘ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು’ ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ ‘ಜನಪ್ರತಿನಿಧಿಗಳ ವಿಶೇಷ ಕೋರ್ಟ್’ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಸಿಎಂ‌ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!