ಕಾಂಗ್ರೆಸ್​ಗೆ ಮತ್ತೊಂದು ಶಾಕ್: ಆರು ಬಾರಿ ಗೆದ್ದ ಶಾಸಕ ರಾವತ್ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ ಮಧ್ಯೆ ಕಾಂಗ್ರೆಸ್​ಗೆ ಮತ್ತೊಂದು ಶಾಕ್ ಎದುರಾಗಿದೆ. ಮಧ್ಯಪ್ರದೇಶದ ಕಾಂಗ್ರೆಸ್​ ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವಿಜಯಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರಾಮ್ನಿವಾಸ್ ರಾವತ್ ಅವರು ಕಾಂಗ್ರೆಸ್​ ತೊರೆದು ಶಿಯೋಪುರದಲ್ಲಿ ಬಿಜೆಪಿ ಸೇರ್ಪಡೆಯಾದರು ಸೇರಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ರಾವತ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಒಬಿಸಿ ಸಮುದಾಯದ ಪ್ರಮುಖ ನಾಯಕರಾಗಿರುವ ರಾಮನಿವಾಸ್ ರಾವತ್ 2019ರ ಲೋಕಸಭೆ ಚುನಾವಣೆಯಲ್ಲಿ ಮೊರೆನಾ ಕ್ಷೇತ್ರದಿಂದ ನರೇಂದ್ರ ಸಿಂಗ್ ತೋಮರ್ ವಿರುದ್ಧ ಸ್ಪರ್ಧಿಸಿ ಭಾರಿ ಅಂತರದಿಂದ ಸೋತಿದ್ದರು.

ರಾವತ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಥಾನವನ್ನು ಪಡೆಯಲು ಬಯಸಿದ್ದರೂ, ಕಾಂಗ್ರೆಸ್ ಪಕ್ಷವು ಮೊರೆನಾ ಸ್ಥಾನದಿಂದ ಸತ್ಯಪಾಲ್ ಸಿಂಗ್ ಸಿಕರ್ವಾರ್ ಅವರಿಗೆ ಟಿಕೆಟ್​ ನೀಡಿತು. ಇದರಿಂದ ಅಸಮಾಧಾನಗೊಂಡ ರಾವತ್​ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ನಾಲ್ಕು ಹಂತಗಳಲ್ಲಿ ಮಧ್ಯಪ್ರದೇಶ ಮತದಾನ ನಡೆಯಲಿದ್ದು, ಇಂದೋರ್‌ನಲ್ಲಿ ಮೇ 13 ರಂದು ಮತದಾನ ನಡೆಯಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!