ಉದ್ಧವ್​ ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್: ಶಿವಸೇನೆ ನಾಯಕ ರಾಮದಾಸ್ ಕದಂ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಿವಸೇನೆ ನಾಯಕರ ಬಂಡಾಯ ಶುರುವಾದಲ್ಲಿಂದ ಮಾಜಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಬಣಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಿವೆ. ಇದೀಗ ಮತ್ತೊಂದು ಹಿನ್ನಡೆಯಾಗಿದ್ದು, ಶಿವಸೇನೆ ನಾಯಕ ಸ್ಥಾನಕ್ಕೆ ಮಾಜಿ ಸಚಿವ ರಾಮದಾಸ್ ಕದಂ ರಾಜೀನಾಮೆ ನೀಡಿದ್ದಾರೆ.
ಉದ್ಧವ್ ಠಾಕ್ರೆ ಬಣದಲ್ಲಿ ಕಾಣಿಸಿಕೊಂಡಿದ್ದ ಪ್ರಮುಖ ನಾಯಕನಾಗಿರುವ ರಾಮದಾಸ್ ಕದಂ ರಾಜೀನಾಮೆ ಠಾಕ್ರೆಗೆ ದೊಡ್ಡ ಹೊಡೆತ ಸಿಕ್ಕಿದಂತಾಗಿದೆ.
ರಾಮದಾಸ್ ಕದಂ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಎನ್​ಸಿಪಿ ಮತ್ತು ಕಾಂಗ್ರೆಸ್​ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಬಾಳಾಸಾಹೇಬ್​ ಠಾಕ್ರೆ ಅವರ ಸಿದ್ಧಾಂತ ಗಾಳಿಗೆ ತೋರಿದ್ದಾರೆಂಬ ಆರೋಪ ಮಾಡಿದ್ದಾರೆ.
ಈಗಾಗಲೇ ರಾಮದಾಸ್ ಕದಂ ಅವರ ಪುತ್ರ ಏಕನಾಥ್ ಶಿಂದೆ ನೇತೃತ್ವದ ಬಂಡಾಯ ಬಣದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ರಾಮದಾಸ್​​, ನಾನು ಶಿವಸೇನೆಯಲ್ಲಿದ್ದೇನೆ. ಉದ್ಧವ್​ ಠಾಕ್ರೆ ಅವರಿಗೆ ಬೆಂಬಲ ಮುಂದುವರೆಸುತ್ತೇನೆಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!