ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಸಿಕ್ಕಿದೆ .
ಕೇಂದ್ರ ಸಚಿವ, ಸಂಸದ ಪ್ರಹ್ಲಾದ್ ಜೋಶಿಯವರು ಅಕ್ಟೋಬರ್ 16, 2025ರಂದು ಸಲ್ಲಿಸಿದ್ದ ಮನವಿಯನ್ನ ಉಲ್ಲೇಖಿಸಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ ಮುಂಚೆ ಬೆಂಗಳೂರು-ಮುಂಬಯಿ ಮಧ್ಯೆ ಸಂಪರ್ಕ ಕಲ್ಪಿಸಲು ಉದ್ಯಾನ ಎಕ್ಸ್ ಪ್ರೆಸ್ ಮಾತ್ರ ಸಂಚಾರ ನಡೆಸುತ್ತಿತ್ತು. ಅದು ಬೆಂಗಳೂರಿನಿಂದ ಗುಂಟಕಲ್ – ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ, ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದರು. ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್ ಕೊಟ್ಟಿದ್ದರು.
ಇದೀಗ ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಒಪ್ಪಿಗೆ ಸೂಚಿಸಿದ್ದು, ಅದಕ್ಕೀಗ ಅನುಮೋದನೆಯೂ ಸಿಕ್ಕಿದೆ.
ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಿರುವ ರೈಲ್ವೇ ಸಚಿವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ. ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಲಕ್ಷಾಂತರ ಜನ

