ಹೊಸದಿಗಂತ ವರದಿ, ಮಡಿಕೇರಿ:
ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರಿದಿದ್ದು, ಗುರುವಾರ ರಾತ್ರಿ ಹರಿಹರ ಗ್ರಾಮದಲ್ಲಿ ತೀತೀರ ಸದಾ ಬೋಪಯ್ಯ ಅವರ ಎರಡು ಎಮ್ಮೆಗಳು ಹುಲಿ ದಾಳಿಗೆ ಬಲಿಯಾಗಿವೆ. ಕಳೆದ ವಾರವಷ್ಟೇ ಚಿಮ್ಮುಣಿರ ಜೀವನ್ ಎಂಬವರ ಹಸುವನ್ನು ಹುಲಿ ಕೊಂದಿದ್ದು, ಅವರ ಗ್ರಾಮಸ್ಥರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.
ಶುಕ್ರವಾರ ಬೆಳಗ್ಗೆ ಸ್ಥಳಕ್ಕೆ ವೀರಾಜಪೇಟೆ ತಾಲೂಕು ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ ಅವರು ಭೇಟಿ ನೀಡಿ ಹುಲಿ ಸೆರೆ ಹಿಡಿಯದ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶೀಘ್ರದಲ್ಲೇ ಪರಿಹಾರವನ್ನು ತಲುಪಿಸಬೇಕು ಮತ್ತು ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕೆಂದು ಅವರು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಮನ್ನೇರ ಅಜಿತ್, ಕೃಷಿ ಮೊರ್ಚಾದ ಶೆಟ್ಟಿಗೇರಿ ಸ್ಥಾನೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಚಿರ ರಾಜ, ಬಿಜೆಪಿ ಕಾರ್ಯಕರ್ತರಾದ ಚಿಮ್ಮುಣಿರ ವಿಜು, ಬಿದ್ದಪ್ಪ, ವಿನು, ತೀತಿರ ರಘು, ಸತಿಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ