ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಒಂದು ಗಂಟೆ ಸುರಿದ ಭಾರೀ ಮಳೆಗೆ ಜೀವವೇ ಹೋಗಿದೆ.
ಹೌದು, ನಿನ್ನೆಯಷ್ಟೇ ಅಂಡರ್ಪಾಸ್ನಲ್ಲಿ ಸಿಲುಕಿ ಯುವತಿಯೊಬ್ಬರು ಮೃತಪಟ್ಟಿದ್ದರು. ಇದೀಗ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ.
ಕೆ.ಪಿ. ಅಗ್ರಹಾರದ ರಾಜಕಾಲುವೆಯಲ್ಲಿ ಲೋಕೇಶ್ ಎನ್ನುವವರು ಕೊಚ್ಚಿಹೋಗಿದ್ದು, ಬ್ಯಾಟರಾಯನಪುರ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.