ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬಲಿ: ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ರಾಜ್ಯದಲ್ಲಿ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ದಾವಣಗೆರೆ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ. ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊನ್ನಾಳಿಯಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಸರಿಯಾಗಿ ಪಾವತಿ ಮಾಡದ ಹಿನ್ನೆಲೆ 20 ದಿನಗಳ ಹಿಂದೆ ಪುಷ್ಪಲತ ದಂಪತಿ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಫೈನಾನ್ಸ್‌ ಸಿಬ್ಬಂದಿ ದೂರು ನೀಡಿದ್ದರು.

ದೂರು ದಾಖಲಾದ ಬಳಿಕ ಹೊನ್ನಾಳಿ ಠಾಣೆ ಪೊಲೀಸರು ಫೈನಾನ್ಸ್ ಕಂಪನಿಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರು. ಸೋಮವಾರ ಬೆಳಗಿನ ಜಾವ ತುಂಗಾಭದ್ರ ನದಿಗೆ ಹಾರಿ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!