ಸ್ಯಾಂಡಲ್‌ವುಡ್ ನಲ್ಲಿ ಮತ್ತೊಂದು ಮದುವೆ ಸಂಭ್ರಮ:`ವಿಕ್ರಾಂತ್ ರೋಣ’ ನಟಿಗೆ ಎಂಗೇಜ್‌ಮೆಂಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್ ನಲ್ಲಿ ಈಗ ಮದುವೆ ಸಂಭ್ರಮ. ಇತ್ತೀಚೆಗೆ ಅಭಿಷೇಕ್ ಅಂಬರೀಷ್ , ನಟಿ ಹರಿಪ್ರಿಯಾ- ವಸಿಷ್ಠ , ಹೀಗೆ ಅನೇಕ ಮಂದಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೀಗ ನಟಿ ನೀತಾ ಅಶೋಕ್ ಸರದಿ.

ತಮ್ಮ ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಕಾಲಿಡಲು ನೀತಾ ರೆಡಿಯಾಗಿದ್ದಾರೆ.

ಖಾಸಗಿ ವಾಹಿನಿಯ `ಯಶೋದೆ’ ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಕರಾವಳಿ ಚೆಲುವೆ ನೀತಾ ಅಶೋಕ್, ತುಳುವಿನ `ಜಬರ್‌ದಸ್ತ್ ಶಂಕರ’ ಸಿನಿಮಾಗೆ ನಾಯಕಿಯಾದ್ರು. ಬಳಿಕ ಸುದೀಪ್ ನಟನೆಯ `ವಿಕ್ರಾಂತ್ ರೋಣ’ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದರು. ಈ ಚಿತ್ರದ ನಂತರ ಮುಂದೆ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾದು ಕೂತಿದ್ದ ಫ್ಯಾನ್ಸ್‌ಗೆ ಮದುವೆಯ ಸುದ್ದಿ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ತಮ್ಮ ಬಹುಕಾಲದ ಗೆಳೆಯ ಸತೀಶ್ ಜೊತೆ ನೀತಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಕ್ಲಾಸ್‌ಮೇಟ್ ಟು ಸೋಲ್‌ಮೇಟ್ ಎಂಬ ಪೋಸ್ಟ್ ಹಾಕುವ ಮೂಲಕ ತಾವು ಎಂಗೇಜ್ ಆಗಿರುವ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!