ಹೊಸದಿಗಂತ ಡಿಜಿಟಲ್ ಡೆಸ್ಕ್
ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಜನರಿಗೆ ಭಾರೀ ಉಪಟಳ ನೀಡಿದ್ದ ಮತ್ತೊಂದು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಮೂರುಕಾಡಾನೆಗಳ ಪೈಕಿ ಒಂದು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಲವು ದಿನಗಳ ಹಿಂದೆಸೆರೆ ಹಿಡಿದಿದ್ದರು. ಇದೀಗ ಮತ್ತೊಂದು ಸೆರೆ ಹಿಡಿಯಲಾಗಿದ್ದು, ಇನ್ನೂ, ಒಂದು ಆನೆ ಸೆರೆ ಹಿಡಿಯಬೇಕಾಗಿದೆ.
ಕೆಲವು ದಿನಗಳ ಹಿಂದೆ ಕಾಡಾನೆ ದಾಳಿಗೆ ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಮೃತಪಟ್ಟಿದ್ದರು. ಘಟನೆ ಗ್ರಾಮದ ಜನರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಆದೇಶ ಹೊರಡಿಸಿತ್ತು. ಇದೀಗ ಮೂರು ಆನೆ ಕಾಡಾನೆಗಳ ಪೈಕಿ ಎರಡು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.