ಹೊಸದಿಗಂತ ಡಿಜಿಟಲ್ ಡೆಸ್ಕ್ :
ಆಸ್ಟ್ರೇಲಿಯಾದಲ್ಲಿ ಹಿಂದು ದೇವಾಲಯದಲ್ಲಿ ಖಲಿಸ್ತಾನ್ ಬೆಂಬಲಿಗರು ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಗೀಚಿರುವ ಘಟನೆ ವರದಿಯಾಗಿದೆ.
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ ಮಿಲ್ ಪಾರ್ಕ್ನ ಸ್ವಾಮಿ ನಾರಾಯಣ ದೇವಾಲಯದ ಗೋಡೆಗಳ ಮೇಲೆ ಹಿಂದೂಸ್ತಾನ್ ಮುರ್ದಾಬಾದ್ ಎಂದು ಬರೆಯಲಾಗಿದೆ. ಈ ದಾಳಿಯನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ.
ಈ ವಿಧ್ವಂಸಕ ಕೃತ್ಯಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಹಾಗೂ ಇದನ್ನು ಖಂಡಿಸುತ್ತೇವೆ. ನಾವು ಶಾಂತಿ ಹಾಗೂ ಸೌಹಾರ್ದತೆಗೆ ಪ್ರಾರ್ಥನೆ ಮಾಡುತ್ತೇವೆ ಎಂದು ತಿಳಿಸಿದೆ.
ಖಲಿಸ್ತಾನ್ ಗುಂಪು ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರಾವಾಲೆಗೆ ಬೆಂಬಲ ವ್ಯಕ್ತಪಡಿಸಿದ್ದು, ಸಿಖ್ ಬಹುಸಂಖ್ಯಾತ ಖಲಿಸ್ತಾನ್ ರಾಜ್ಯವನ್ನು ರಚಿಸಲು ದೊಡ್ಡಮಟ್ಟದಲ್ಲಿ ಪ್ರಯತ್ನ ಪಟ್ಟಿದ್ದನು. ಆತ ಆಪರೇಷನ್ ಬ್ಲೂಸ್ಟಾರ್ ಸಮಯದಲ್ಲಿ ಸೇನೆಯಿಂದ ಕೊಲ್ಲಲ್ಪಟ್ಟಿದ್ದನು.
ಮೆಲ್ಬೋರ್ನ್ನ ಹಿಂದೂ ಸಮುದಾಯ ಪೊಲೀಸರಿಗೆ ದೂರು ನೀಡಿದೆ.