ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ವಿಪಕ್ಷಗಳು ಒಂದಾಗಿದ್ದು, ಗೆಲುವಿಗೆ ರಣತಂತ್ರ ರೂಪಿಸುತ್ತಿದೆ.
ಇದರ ಭಾಗವಾಗಿ ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಆಮ್ ಆದ್ಮಿ ಪಕ್ಷ(ಎಎಪಿ) ಸಿದ್ಧವಾಗಿದೆ. ಇದಕ್ಕಾಗಿ ಸಭೆ ಕೂಡ ನಡೆಸಿದೆ.
ಆದರೆ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆ ಸಕಾರಾತ್ಮಕವಾಗಿದೆ ಎಂದು ಆಪ್ ದೆಹಲಿ ಸಂಚಾಲಕ ಗೋಪಾಲ್ ರೈ ಅವರು ಮಂಗಳವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಸೋಮವಾರ ಚರ್ಚೆ ನಡೆಸಿವೆ.
ಎರಡೂ ಪಕ್ಷಗಳ ನಡುವೆ(ಸೀಟು ಹಂಚಿಕೆ ಕುರಿತು) ಮಾತುಕತೆ ಪ್ರಾರಂಭವಾಗಿದೆ. ನಾವು ದೆಹಲಿ, ಪಂಜಾಬ್, ಹರಿಯಾಣ, ಗೋವಾ ಮತ್ತು ಗುಜರಾತ್ನಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ನಮ್ಮ ನಿಲುವಿಗೆ ಬದ್ಧವಾಗಿದ್ದೇವೆ.ಇಲ್ಲಿಯವರೆಗೆ, ಸಕಾರಾತ್ಮಕ ಚರ್ಚೆಗಳು ನಡೆದಿವೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಿಮ್ಮ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರೈ, ಈ ರಾಜ್ಯಗಳಲ್ಲಿ ನಿರ್ದಿಷ್ಟ ಸ್ಥಾನಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಎಎಪಿ ನಾಯಕ ಹೇಳಿದ್ದಾರೆ.
ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಬಯಸುತ್ತೇವೆ. ಮುಂದಿನ ಸಭೆಯಲ್ಲಿ ಸೀಟುಗಳ ಬಗ್ಗೆ ಮಾತುಕತೆ ನಡೆಯಲಿದೆ. ಮೈತ್ರಿಯಲ್ಲಿದ್ದಾಗ ಅಧಿಕೃತ ನಿಲುವು ತೆಗೆದುಕೊಳ್ಳಬೇಕು. ಅದಕ್ಕಾಗಿ ಎರಡೂ ಪಕ್ಷಗಳು ಚರ್ಚಿಸಿ ತಮ್ಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತವೆ ಎಂದು ತಿಳಿಸಿದ್ದಾರೆ.