ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಸರ್ಕಾರ ಈಗಾಗಲೇ ನೇಮಿಸಿದ್ದು, ಇದನ್ನು ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಇದೀಗ ಡಿಸೆಂಬರ್ 16 2022ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು ಲಿಖಿತ ವಾದಾಂಶದಲ್ಲಿ ಹೊಸ ಅಂಶ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಪೀಠ ನಿರ್ಧರಿಸಿದೆ.
3 ದಿನಗಳಲ್ಲಿ ರಿಟ್ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಮತ್ತೆ ವಿಚಾರಣೆಯನ್ನು ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದು ಕಾನೂನಿನಡಿ ಮಠಾಧಿಪತಿಗಳ ಅಧಿಕಾರ ವ್ಯಾಪ್ತಿ ಹಾಗೂ ಇತ್ಯಾದಿಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲು ಸೂಚಿಸಿದೆ.