ಬಿಜೆಪಿ ಪ್ರಕೋಷ್ಠಗಳಿಗೆ ಸಂಚಾಲಕ, ಸಹಸಂಚಾಲಕರ ನೇಮಕ: ಮುಖ್ಯ ವಕ್ತಾರರಾಗಿ ಅಶ್ವತ್ಥನಾರಾಯಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಜನತಾ ಪಾರ್ಟಿಯ ಮುಖ್ಯ ವಕ್ತಾರರು, ವಕ್ತಾರರು ಹಾಗೂ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕ, ಸಹಸಂಚಾಲಕರನ್ನು ನಿಯುಕ್ತಿಗೊಳಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ ಅವರನ್ನು ಪಕ್ಷದ ಮುಖ್ಯ ವಕ್ತಾರರನ್ನಾಗಿ ನೇಮಕಗೊಳಿಸಲಾಗಿದ್ದು, ವಕ್ತಾರರಾಗಿ ಹರಿಪ್ರಕಾಶ್ ಕೋಣೆಮನೆ, ಛಲವಾದಿ ನಾರಾಯಣ ಸ್ವಾಮೀ, ಡಾ. ತೇಜಸ್ವಿನಿ ಗೌಡ, ಕೆ.ಎಸ್. ನವೀನ್, ಎಂ.ಜಿ. ಮಹೇಶ್, ಎಚ್.ಎನ್. ಚಂದ್ರಶೇಖರ್, ಡಾ. ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಹೆಚ್. ವೆಂಕಟೇಶ್ ದೊಡ್ಡೇರಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಇನ್ನು ಪಕ್ಷದ ಸಾಮಜಿಕ ಜಾಲತಾಣದ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾಗಿ ನರೇಂದ್ರ ಮೂರ್ತಿ, ಮಾಹಿತಿ ತಂತ್ರಜ್ನಾನ ವಿಭಾಗದ ಸಂಚಾಲಕರಾಗಿ ನಿತಿನ್‌ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್, ಮಾಧ್ಯಮ ವಿಭಾಗದ ಸಂಚಾಲಕರಾಗಿ ಕರುಣಾಕರ ಖಾಸಲೆ, ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿ ಅವರನ್ನು ರಾಜ್ಯಾಧ್ಯಕ್ಷರು ನಿಯುಕ್ತಿಗೊಳಿಸಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!