ಹೊಸದಿಗಂತ ವರದಿ: ಕಲಬುರಗಿ:
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರ ಸೂಚನೆಯ ಮೇರೆಗೆ ಈ ಕೆಳಕಂಡ ವ್ಯಕ್ತಿಗಳನ್ನು ಕಲಬುರಗಿ ಮಹಾನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಿಯುಕ್ತಿ ಮಾಡಲಾಗಿದೆ ಎಂದು ಬಿಜೆಪಿ ಮಹಾನಗರ ಘಟಕದ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ತಿಳಿಸಿದ್ದಾರೆ.
ಪಕ್ಷವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ ಹಾಗೂ ಶಿವಯೋಗ ನಾಗನಹಳ್ಳಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ಹಿಂದಿನ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಕೆಲಸ ಮಾಡಿದ ಉಮೇಶ್ ಪಾಟೀಲ್ ಹಾಗೂ ಮಹಾದೇವ ಬೆಳಮಗಿ,ಶಿವಯೋಗಿ ನಾಗನಹಳ್ಳಿ ಅವರನ್ನು ಎರಡನೇ ಅವಧಿಗೆ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿ ಮಾಡಲಾಗಿದೆ.