ಪುನೀತ್ ನೆನಪಿನಲ್ಲಿ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ’ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ ಎಂದು ಹೇಳಿದರು.

ಅಪ್ಪು ಬಾಲ್ಯದಿಂದಲೂ ನಾನು ನೋಡಿದ ಹುಡುಗ, ಆತ ಸಮಾಜಮುಖಿಯಾಗಿ ಬೆಳೆದ ವ್ಯಕ್ತಿ. ಆ ಎತ್ತರಕ್ಕೆ ಬೆಳೆದ ವ್ಯಕ್ತಿಯಿಂದ ಇನ್ನೊಂದಷ್ಟು ಕೆಲಸಗಳು ಆಗಬೇಕಾಗಿತ್ತು. ಆ ಜನಪರ ವ್ಯಕ್ತಿತ್ವವನ್ನು ಅನುಕರಿಸುವ ಭಾಗವಾಗಿ ಪ್ರತಿಷ್ಠಾನದಿಂದ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!