2017ರಲ್ಲಿ ಅರ್ಜುನ ಪ್ರಶಸ್ತಿ ಘೋಷಣೆ: 5 ವರ್ಷಗಳ ಬಳಿಕ ಪಡೆದ ಕ್ರಿಕೆಟರ್‌ ಚೇತೇಶ್ವರ ಪೂಜಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಕ್ರಿಕೆಟರ್‌ ಚೇತೇಶ್ವರ ಪೂಜಾರಗೆ 2017ರಲ್ಲಿ ಅರ್ಜುನ ಪ್ರಶಸ್ತಿ ಘೋಷಣೆಯಾಗಿತ್ತು. ಇದೀಗ 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

2017ರಲ್ಲಿನಡೆದ ಕಾರ್ಯಕ್ರಮಕ್ಕೆ ಪೂಜಾರ ಗೈರಾಗಿದ್ದರು. ಹೀಗಾಗಿ 5 ವರ್ಷಗಳ ಬಳಿಕ ಅರ್ಜುನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌ರಿಂದ ಪೂಜಾರ ಸ್ವೀಕರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪೂಜಾರ, ನಾನು 2017ರಲ್ಲಿ ಅರ್ಜುನ ಪ್ರಶಸ್ತಿ ಬಂದಾಗ ಸ್ವೀಕರಿಸಿರಲಿಲ್ಲ. ಕ್ರಿಕೆಟ್ ನಡುವೆ ಬಿಡುವಿಲ್ಲದ ಕಾರಣ ಹಾಗೆ ಉಳಿದುಕೊಂಡಿತ್ತು. ಇದೀಗ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್‌ರಿಂದ ಪ್ರಶಸ್ತಿ ಪಡೆದುಕೊಂಡಿದ್ದೇನೆ. ಬಿಸಿಸಿಐ (BCCI) ಮತ್ತು ಸಚಿವರಿಗೆ ಧನ್ಯವಾದ ಎಂದಿದ್ದಾರೆ.

ಪೂಜಾರ ಸದ್ಯ ಸೌರಾಷ್ಟ್ರ ಪರ ವಿಜಯ್ ಹಜಾರೆ ದೇಸಿ ಟೂರ್ನಿಯಲ್ಲಿ ಆಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!