ಕಥುವಾದಲ್ಲಿ 4ನೇ ದಿನವೂ ಮುಂದುವರೆದ ಸೇನಾ ಕಾರ್ಯಾಚರಣೆ; ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಲ್ಕು ದಿನಗಳಿಂದ ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ಸಾಗುತ್ತಿದ್ದು, ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ನಡೆದ ಹಿರಾನಗರ ಕಾರ್ಯಾಚರಣೆಯಿಂದ 30 ಕಿ.ಮೀ ದೂರದಲ್ಲಿರುವ ರಾಜ್‌ಬಾಗ್‌ನ ಘಾಟಿ ಜುಥಾನಾ ಪ್ರದೇಶದ ಜಖೋಲೆ ಗ್ರಾಮದ ಬಳಿ ಕಾರ್ಯಾಚರಣೆ ಮುಂದುವರೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಕುರಿತು ಮಾಹಿತಿ ಸಿಕ್ಕಿದ್ದು ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಎರಡು ಕಡೆಯಿಂದಲೂ ಗುಂಡಿನ ದಾಳಿ ನಡೆದಿದ್ದು, ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಭಾನುವಾರ ಹಿರಾನಗರ ಸೆಕ್ಟರ್​ನಲ್ಲಿ ಒಂದೂವರೆ ಗಂಟೆ ನಡೆದ ಗುಂಡಿನ ದಾಳಿಯಲ್ಲಿನ ಭಯೋತ್ಪಾದಕರ ಗುಂಪೇ ಇಂದಿನ ಗುಂಡಿನ ಚಕಮಕಿಯಲ್ಲೂ ಭಾಗಿಯಾಗಿದೆ. ಇವರು ಗಡಿಯಾಚೆಯಿಂದ ಹೊಸದಾಗಿ ರಚಿಸಲಾದ ಸುರಂಗದ ಮೂಲಕ ನುಸುಳಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!