ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತೀಯ ಸೇನಾ ವಾಹನ ಪ್ರಪಾತಕ್ಕೆ ಉರುಳಿ16 ಯೋಧರು ಹುತಾತ್ಮರಾಗಿರುವ ಘಟನೆ ಸಿಕ್ಕಿಂ ನಲ್ಲಿ ನಡೆದಿದೆ.
ಸಿಕ್ಕಿಂ ರಾಜ್ಯದ ಉತ್ತರ ಭಾಗದ ಝೀಮಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ.
ದುರಂತದಲ್ಲಿ 16 ಯೋಧರು ಮೃತಪಟ್ಟಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುತಾತ್ಮರಾದ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ‘ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗಳ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಸೈನಿಕರ ಬದ್ಧತೆಗೆ ದೇಶವೇ ಕೃತಜ್ಞವಾಗಿದೆ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.