ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ವಿಧಿವಶರಾದ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರಿಗೆ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ಗುಳಿಮಂಗಳದಲ್ಲಿರುವ ನಿವಾಸದಲ್ಲಿ ದ್ವಾರಕೀಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ನಿನ್ನೆಯೇ ನಿವಾಸದಲ್ಲಿ ಸಿನಿ ಸೆಲೆಬ್ರಿಟಿಗಳು ದ್ವಾರಕೀಶ್ ಅವರ ಅಂತಿಮ ದರುಶನ ಪಡೆದಿದ್ದರು.
ಇಂದು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ದ್ವಾರಕೀಶ್ ಅವರ ಸ್ಮರಣಾರ್ಥವಾಗಿ ಇಂದು ಎಲ್ಲ ಸಿಂಗಲ್ ಸ್ಕ್ರೀನ್ ಚಿತ್ರ ಮಂದಿರಗಳಲ್ಲಿ ಎಲ್ಲ ಚಿತ್ರಗಳ ಬೆಳಗಿನ ಶೋ ರದ್ದು ಮಾಡಲಾಗಿದೆ.
ಇಂದು ಸಾಕಷ್ಟು ಅಭಿಮಾನಿಗಳು,ಸಿನಿ ಹಾಗೂ ರಾಜಕೀಯ ಗಣ್ಯರು ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರುಶನ ಪಡೆಯಲಿದ್ದಾರೆ.