ಸಿದ್ದರಾಮಯ್ಯರನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸಿ.. ಸ್ನೇಹಮಯಿ ಕೃಷ್ಣ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆಗ್ರಹಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ.

ಸ್ನೇಹಮಹಿ ಕೃಷ್ಣ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ಬಂದು ಲೋಕಾಯುಕ್ತರಿಗೆ ಪತ್ರ ನೀಡಿದ್ದಾರೆ. ಅಕ್ಟೋಬರ್ 10ರಂದು ವಾಟ್ಸ್ ಆ್ಯಪ್ ಮೂಲಕ ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ ಇಂದು ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!