ಸಾರ್ವಜನಿಕರಿಗೆ ಕಿರಿಕ್ ಮಾಡುತ್ತಿದ್ದ ಗಾಂಜಾ ವ್ಯಸನಿಯ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೈಕ್ ನಲ್ಲಿ ಯರ್ರಾಬಿರ್ರಿಯಾಗಿ ಚಲಿಸಿ ರಾಜ್ಯ ಹೆದ್ದಾರಿ ನಡುವೆ ನಿಂತು ಸಾರ್ವಜನಿಕವಾಗಿ ಶಾಂತಿಭಂಗ ನಡೆಸುತ್ತಿದ್ದ ಗಾಂಜಾ ವ್ಯಸನಿಯನ್ನು ಕೊಣಾಜೆ ಠಾಣಾ ಪೊಲೀಸರು ಹಿಡಿದು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚ್ಚೇರಿ ಕೈಕೋ ನಿವಾಸಿ ಅಬೂಬಕರ್ ಸಿದ್ದೀಖ್‌( 24) ಬಂಧಿತ ಆರೋಪಿ.

ಗಾಂಜಾ ಸೇವಿಸಿ ಬೈಕಿನಲ್ಲಿ ಅಜಾಗರೂಕತೆಯಿಂದ ಬಂದಿದ್ದ ಆರೋಪಿ ಕೈಯಲ್ಲಿ ಚೂರಿ ಮತ್ತು ಕಲ್ಲು ಹಿಡಿದುಕೊಂಡು ಸಾರ್ವಜನಿಕವಾಗಿ ಆತಂಕ ಸೃಷ್ಟಿಸಿದ್ದ. ಸ್ಥಳೀಯರು ಕೊಣಾಜೆ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ್ದ ನಿವೃತ್ತ ಯೋಧ ಸಂತೋಷ್ ಹಿಂಬದಿಯಿಂದ ಲಾಕ್ ಮಾಡಿ ಸಿದ್ದೀಖ್ ನನ್ನು ಬಂಧಿಸುವಲ್ಲಿ ಸಫಲರಾದರು. ಈ ವೇಳೆ ಠಾಣಾ ಸಿಬ್ಬಂದಿ ಇನ್ನೋರ್ವ ನಿವೃತ್ತ ಯೋಧ ಪೂರ್ಣೇಶ್ ಹಾಗೂ ಇನ್ನೋರ್ವರು ಸಿಬ್ಬಂದಿ ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!