ಹೊಸದಿಗಂತ ವರದಿ ಮಂಗಳೂರು:
ನೆಟ್ಟಾರು ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಇನ್ನೂ ಒಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಟ್ಟಿಪಳ್ಳದ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಭಗವಾನ್ ಸೊನಾವಣೆ ಬಂಧನವನ್ನು ಖಚಿತ ಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.
ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದೆ. ತಲೆ ತಪ್ಪಿಸಿಕೊಂಡಿರುವ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಎಸ್ಪಿ ಹೃಷಿಕೇಶ್ ತಿಳಿಸಿದ್ದಾರೆ.
ಜು.26ರ ರಾತ್ರಿ 8 ಗಂಟೆಯ ಸುಮಾರಿಗೆ ಪ್ರವೀಣ್ ಅವರ ಹತ್ಯೆ ನಡೆದಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ