ದೆಹಲಿ ಸಿಎಂ ಶೀಘ್ರ ಬಂಧನ, ಆಪ್ ನಾಯಕರ ಮೇಲೆ ದಾಳಿ ನಡೆಸಬಹುದು: ಕೇಜ್ರಿವಾಲ್ ಹೊಸ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಕೇಂದ್ರೀಯ ಸಂಸ್ಥೆಗಳು ಸಂಚು ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಮೂಲಗಳ ಪ್ರಕಾರ, ಇತ್ತೀಚೆಗೆ ಸಿಬಿಐ, ಇಡಿ ಮತ್ತು ಐಟಿ ನಡುವೆ ಸಭೆ ನಡೆದಿತ್ತು ಮತ್ತು ಮುಖ್ಯಮಂತ್ರಿ ವಿರುದ್ಧ ಯಾವುದೇ ಸುಳ್ಳು ಪ್ರಕರಣವನ್ನು ಸೃಷ್ಟಿಸಿ ಅತಿಶಿಯನ್ನು ಬಂಧಿಸುವಂತೆ ಕೇಳಲಾಗಿದೆ” ಎಂದು ಹೇಳಿದ್ದಾರೆ.

“ವಿಧಾನಸಭಾ ಚುನಾವಣೆಗೆ ಮುನ್ನ ನಮ್ಮ ಗಮನವನ್ನು ಬೇರೆಡೆ ಸೆಳೆಯಲು ನನ್ನ ಮೇಲೆ, ಸೌರಭ್ ಭಾರದ್ವಾಜ್ ಮತ್ತು ಇತರ ಎಎಪಿ ನಾಯಕರ ಮೇಲೆ ದಾಳಿ ನಡೆಸುವಂತೆ ತನಿಖಾ ಸಂಸ್ಥೆಗಳಿಗೆ ತಿಳಿಸಲಾಗಿದೆ” ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!