ಆಪ್ತ ಸಚಿವ ಪಾರ್ಥ ಚಟರ್ಜಿ ಬಂಧನ: ಕೊನೆಗೂ ಮೌನ ಮುರಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಂಗಾಳ ಸಚಿವ ಪಾರ್ಥ ಚಟರ್ಜಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೊನೆಗೂ ಮೌನ ಮುರಿದಿದ್ದಾರೆ.
ನಾನು ಭ್ರಷ್ಟಾಚಾರ ಅಥವಾ ಯಾವುದೇ ತಪ್ಪನ್ನು ಬೆಂಬಲಿಸುವುದಿಲ್ಲ’ . ಆದರೆ ಏಜೆನ್ಸಿಗಳನ್ನು ಬಳಸಿಕೊಂಡು ನನ್ನ ಪಕ್ಷವನ್ನು ಒಡೆಯಬಹುದು ಎಂದು ಬಿಜೆಪಿ ಭಾವಿಸಿದರೆ ಅದು ತಪ್ಪು ಎಂದು ದೀದಿ ಹೇಳಿದ್ದಾರೆ .
ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ, ಅವರು ಶಿಕ್ಷೆಗೆ ಒಳಗಾಗಬೇಕು. ಆದರೆ ನನ್ನ ವಿರುದ್ಧ ಯಾವುದೇ ದುರುದ್ದೇಶಪೂರಿತ ಪ್ರಚಾರವನ್ನು ನಾನು ಖಂಡಿಸುತ್ತೇನೆ. ಸಮಯದ ಚೌಕಟ್ಟಿನೊಳಗೆ ಸತ್ಯ ಹೊರಬರಬೇಕು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿಗೆ ತೀರಾ ಆಪ್ತರಾಗಿದ್ದ ಪಾರ್ಥ ಚಟರ್ಜಿ ಬಂಧನದ ಬಗ್ಗೆ ಕಳೆದ ಎರಡು ದಿನಗಳಿಂದ ಸಿಎಂ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!