ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹಂತಕರನ್ನು ಶೀ ಹತ್ಯೆ ಮಾಡಿರುವ ದುಷ್ಕರ್ಮಿಗನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾವುದೇ ದ್ವೇಷಗಳು ಕೊಲೆಯ ಹಂತಕ್ಕೆ ತಲುಪಬಾರದು, ನೆಟ್ಟಾರ್ ಹತ್ಯೆ ನೋವು ತಂದಿದೆ ಎಂದರು.
ಕರಾವಳಿಯಲ್ಲಿ ಹಿಂದೆ ಇಂತಹಾ ಕೃತ್ಯ ನಡೆಯುತ್ತಿತ್ತಾದರೂ ಇತ್ತೀಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಇವುಗಳಿಗೆ ಕಡಿವಾಣ ಹಾಕಲಾಗುವುದು ಎಂದರು.