ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರಿ ಪಂಡಿತ್ ರಾಹುಲ್ ಭಟ್, ಮಹಿಳಾ ಕಲಾವಿದೆ ಅಮರೀನ್ ಭಟ್ ಹಂತಕನನ್ನು ಸೆರೆಹಿಡಿಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಸೆರೆಸಿಕ್ಕಿರುವ ಲಷ್ಕರ್ ಎ ತೊಯ್ಬಾದ ಸಹವರ್ತಿ ಗುಂಪಿನ ಮೂವರು ಉಗ್ರಗಾಮಿಗಳಲ್ಲಿ ಈ ಹಂತಕನೂ ಸೇರಿದ್ದಾನೆ.
ಈತನನ್ನು ಲತೀಫ್ ರಾಥರ್ ಎಂದು ಗುರುತಿಸಲಾಗಿದ್ದು, ಈತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಪೊಲೀಸ್ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.