ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಪ್ರಾಣಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ನಾನಾ ದೇಶಗಳು ಹಾಗೂ ನಮ್ಮ ದೇಶದ ಗಣ್ಯರು ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಇಂದು ಭಯೋತ್ಪಾದಕ ನಿಗ್ರಹ ದಳ ಅನುಮಾನ ಬರುವಂತೆ ನಡೆದುಕೊಂಡ ಮೂವರು ವ್ಯಕ್ತಿಗಳನ್ನು ಬಂಧಿಸಿದೆ.
ಶಂಕಿತರನ್ನು ವಶಕ್ಕೆ ಪಡೆದಿದ್ದೇವೆ, ಅವರ ಉದ್ದೇಶಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ. ಯಾವುದೇ ಭಯೋತ್ಪಾದ ಸಂಘಟನೆಯೊಂದಿಗೆ ಸಂಪರ್ಕ ಇರುವ ವಿಚಾರ ಇನ್ನೂ ಬಹಿರಂಗವಾಗಿಲ್ಲ ಎಂದು ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಮುಖ್ಯ ಬೀದಿಗಳಲ್ಲಿ ಸಿಸಿಟಿವಿ ಹಾಗೂ ಡ್ರೋನ್ ಕಣ್ಗಾವಲನ್ನು ಹೆಚ್ಚಿಸಲಾಗಿದೆ.