ಹೊಸದಿಗಂತ ಆನ್ಲೈನ್ ಡೆಸ್ಕ್
ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಹೇಡಿಗಳ ಅಟ್ಟಹಾಸಕ್ಕೆ ಹಿಂದೂ ಕಾರ್ಯಕರ್ತ ಹತ್ಯೆಯಾಗಿದ್ದನ್ನು ಖಂಡಿಸುತ್ತೇನೆ. ಕೃತ್ಯ ಎಸಗಿದ ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಸಂದರ್ಭ ಯುವಕ ಹರ್ಷ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೂಡಾ ಸಚಿವರು ಪ್ರಾರ್ಥಿಸಿದ್ದಾರೆ.