ಹೊಸದಿಗಂತ ವರದಿ,ಕಲಬುರಗಿ:
ಕೆಂಪಣ್ಣ ಅವರನ್ನು ಬೆದರಿಸಲು ಬಂಧಿಸಲಾಗಿದೆ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜಿಲ್ಲೆಯ ಜೇವರ್ಗಿ ತಾಲೂಕಿನ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಂಪಣ್ಣ ಮೇಲೆ ಹಾಕಿರುವುದು ಮಾನನಷ್ಟ ಮೊಕದ್ದಮೆ. ಅದು ಅರೆಸ್ಟ್ ಮಾಡುವ ಕೇಸ್ ಅಲ್ಲ. ಅವರೇನು ಕೊಲೆ, ದರೋಡೆ ಮಾಡಿಲ್ಲ. ಆದರೂ ಅವರು ವಿಚಾರಣೆಗೆ ಬರಲಿಲ್ಲಾ ಎಂದು, ಉದ್ದೇಶ ಪೂರ್ವಕವಾಗಿ ಅರೆಸ್ಟ್ ಮಾಡಿಸಿದ್ದಾರೆ ಎಂದು ಹೇಳಿದರು.
ಗಾಲಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಸಿ, ಆ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರು ನಿರಾಕರಿಸಿದರು.