ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯ ಕೆಲವೆಡೆ ಸೋಮವಾರ ವರುಣನ ಆಗಮನವಾಗಿದೆ.
ವೀರಾಜಪೇಟೆ ತಾಲೂಕಿನ ಬೆಳ್ಳುಮಾಡು, ಕುಂಜಿಲಗೇರಿ ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಆ ಭಾಗದ ಜನರಿಗೆ ತಂಪೆರೆದಿದೆ.
ಇತ್ತೀಚಿನ ದಿನಗಳಲ್ಲಿ ಆ ಭಾಗದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಅಲ್ಲದೆ ಕಾಫಿ ಗಿಡಗಳು ಒಣಗಿ ನಿಂತಿದ್ದವು. ಇದೀಗ ಸುರಿದ ಮಳೆಯಿಂದ ಆ ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊಡಗಿನ ನಾಪೋಕ್ಲು ಸಮೀಪದ ಕುಂಜಿ ಲಗೇರಿ ,ಬೊಳ್ಳುಮಾಡು ,ಚೆಯ್ಯoಡಾಣೆ, ಕಡಂಗ , ಕರಡ ,ಹರಪಟ್ಟು ನರಿಯಂದಡ,ಗ್ರಾಮಗಳಲ್ಲಿ ಸೋಮವಾರ ಸಂಜೆ ಬಿರುಸಿನ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರಿಟ್ಟರು. ಬೆಳೆಗಾರರು ಸಂತಸ ಗೊಂಡರು.
ಸೋಮವಾರ ಸಂಜೆ ಕೊಡಗಿನ ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಗುಡುಗು ಕೂಡಾ ಕಂಡು ಬಂದಿತ್ತು.