ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಕರ್ನಾಟಕ್ಕೆ ಆಗಮಿಸಲಿದ್ದು ರಾತ್ರಿ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ತಂಗಲಿದ್ದಾರೆ.
ನಾಳೆ (ಜೂ.5)ರಂದು ಬೆಳಿಗ್ಗೆ ಮಲ್ಲೇಶ್ವರದ ಬಿಜೆಪಿಯ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿಕೊಡಲಿದ್ದು ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಮತ್ತೆ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.