ಪಂಜಾಬ್ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಿಸಿದ ಅರವಿಂದ್ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚರಾಜ್ಯ ಚುನಾವಣೆಗೆ ಎಲ್ಲ ರಾಜ್ಯಗಳಲ್ಲೂ ಭರ್ಜರಿ ತಯಾರಿ ನಡೆದಿದ್ದು, ದೆಹಲಿ ಸಿಎಂ ಅರವಿಂದ್
ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪಂಜಾಬ್ ಚುನಾವಣೆಗೆ ತನ್ನ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಭಗವಂತ ಮಾನ್ ಅವರು ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಸಂಗ್ರೂರ್‌ನಿಂದ ಎರಡು ಬಾರಿ ಎಎಪಿ ಸಂಸದರಾಗಿರುವ ಭಗವಂತ್ ಮಾನ್ ಅವರು ಫೋನ್ ಮತ್ತು ವಾಟ್ಸಾಪ್ ಮೂಲಕ ಶೇ. 63ಕ್ಕಿಂತ ಹೆಚ್ಚು ಮತ ಪಡೆದಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!