ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಸಮನ್ಸ್ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಜರಾಗದೆ ಗೈರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸತತವಾಗಿ ಸಮನ್ಸ್ ಜಾರಿಗೊಳಿಸುತ್ತಿದ್ದು, ಇದುವರೆಗಿನ ಯಾವುದೇ ಸಮನ್ಸ್ಗಳಿಗೂ ಕೇಜ್ರಿವಾಲ್ ಹಾಜರಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷ, ಈ ಸಮನ್ಸ್ ಕಾನೂನು ಬಾಹಿರವಾಗಿದೆ ಎಂಬ ತನ್ನ ನಿಲುವನ್ನು ಪುನರುಚ್ಚರಿಸಿದೆ.