ಹೊಸ ದಿಗಂತ ವರದಿ, ಕಲಬುರಗಿ:
ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರ ‘ಸಬ್ ಕಾ ಸಬ್ ಕಾ ವಿಕಾಸ್’ ಎಂಬ ಧ್ಯೇಯ ವಾಕ್ಯದಡಿ
ಕೃಷಿಕರು, ಉದ್ದಿಮೆದಾರರು, ಯುವಕರಿಗೆ ಸಹಾಯವಾಗುವ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ ಅತ್ಯಂತ ಜನಸ್ನೇಹಿ ಬಜೆಟ್ ಇದಾಗಿದೆ ಎಂದು ಕ್ರೆಡೆಲ್ ಅಧ್ಯಕ್ಷ, ಬಿಜೆಪಿ ಯುವ ಮುಖಂಡ ಚಂದು ಪಾಟೀಲ್ ಹೇಳಿದ್ದಾರೆ.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಆತ್ಮನಿರ್ಭರ ಭಾರತವನ್ನಾಗಿ ಮಾಡುವಲ್ಲಿ ಇಂದಿನ ಬಜೆಟ್ ಸಹಾಯಕವಾಗಿದೆ ಎಂದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸಿತಾರಮನ ದೂರದೃಷ್ಟಿಯ ಬಜೆಟ್ ಮಂಡಿಸಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.