ಎಲ್ಲೀವರೆಗೆ ಮೋದಿ ಜೀವಂತವಾಗಿದ್ದಾರೋ, ಅಲ್ಲೀವರೆಗೆ ಎಸ್‌ಸಿ ಎಸ್‌ಟಿ ಮೀಸಲಾತಿ ಮುಸ್ಲಿಮರಿಗೆ ನೀಡಲು ಬಿಡುವುದಿಲ್ಲ: ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
 
ದೇಶದಲ್ಲಿ ಧರ್ಮ ಆಧಾರಿತ ಮೀಸಲಾತಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತೆಲಂಗಾಣದ ಮೇದಕ್‌ನಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡುವ ಕಾಂಗ್ರೆಸ್ ಯೋಜನೆಗೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಈ ನೀತಿ ಜಾರಿಗೊಳಿಸಲು ನಾನಿನ್ನು ಬದುಕಿದ್ದೇನೆ ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ತನ್ನ ಮತ ಬ್ಯಾಂಕ್‌ಗಾಗಿ ಸಂವಿಧಾನಕ್ಕೆ ಅಪಮಾನ ಮಾಡುತ್ತಿದೆ. ಆದ್ರೆ ಎಲ್ಲೀವರೆಗೆ ಮೋದಿ ಜೀವಂತವಾಗಿದ್ದಾರೋ, ಅಲ್ಲೀವರೆಗೆ ಎಸ್‍‌ಸಿ, ಎಸ್‌ಟಿ, ಹಿಂದು ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ಮುಸ್ಲಿಮ್ ಸಮುದಾಯಕ್ಕೆ ನೀಡಲು ಬಿಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಲಿಂಗಾಯತ್ ಹಾಗೂ ಮರಾಠ ಸಮುದಾಯ ಹಲವು ವರ್ಷಗಳಿಂದ ಹಿಂದುಳಿದ ವರ್ಗಗಳ ಸ್ಥಾನಮಾನಕ್ಕೆ ಹೋರಾಟ ನಡೆಸುತ್ತಿದೆ. ಇದು ಕಾಂಗ್ರೆಸ್‌ಗೆ ಕಾಣಿಸುತ್ತಲೇ ಇಲ್ಲ. ಆದರೆ ಒಂದು ರಾತ್ರಿಯಲ್ಲೇ ಕಾಂಗ್ರೆಸ್ ಮುಸ್ಲಿಮರಿಗೆ ಒಬಿಸಿ ಸ್ಥಾನಮಾನ ನೀಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತೆಲುಗು ಸಿನಿಮಾ ದೇಶಕ್ಕೆ ಆರ್‌ಆರ್‌ಆರ್ ಅನ್ನೋ ಅತ್ಯುತ್ತಮ ಚಿತ್ರ ಕೊಟ್ಟಿದೆ. ಆದರೆ ತೆಲಂಗಾಣ ಕಾಂಗ್ರೆಸ್ ಸರ್ಕಾರ ಆರ್‌ಆರ್ ತೆರಿಗೆ ಹಾಕುತ್ತಿದೆ. ಉದ್ಯಮಿಗಳು ಆರ್‌ಆರ್ ತೆರಿಗೆ ಕಟ್ಟಲೇಬೇಕು ಅನ್ನೋ ನಿಯಮ ರೂಪಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಆರ್‌ಆರ್ ತೆರಿಗೆ ಎಂದರೆ ರೇವಂತ್ ರೆಡ್ಡಿ ಹಾಗೂ ರಾಹುಲ್ ಗಾಂಧಿ ಟ್ಯಾಕ್ಸ್ ಎಂದು ಮೋದಿ ಹೇಳಿದ್ದಾರೆ. ಈ ಹಣವನ್ನು ದೆಹಲಿಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಅಮಿತ್ ಶಾ ಕುರಿತು ಹರಿದಾಡುತ್ತಿರುವ ಡೀಪ್ ಫೇಕ್ ವಿಡಿಯೋ ಕುರಿತು ಮೋದಿ ಮಾತನಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಅಮಿತ್ ಶಾ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ಮೂಲಕ ಸಾರ್ವಜನಿಕರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ಇದರ ಹಿಂದೆಯೂ ಇದೇ ಆರ್‌ಆರ್ ಕೈವಾಡವಿದೆ ಎಂದು ಮೋದಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!