Tuesday, October 3, 2023

Latest Posts

ತಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ: ಗಂಭೀರ್ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಮಣಿಪುರದ ಮಹಿಳೆಯ ಮೆರವಣಿಗೆ ಮಾಡಿದ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದ್ದು, ತನ್ನನ್ನು ತಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಶುಕ್ರವಾರ ಹೇಳಿದ್ದಾರೆ.

ಇದು ಸಾಮಾನ್ಯ ಘಟನೆಯಲ್ಲ. ಇಂತಹ ಘಟನೆಗಳು ನಡೆದಂತೆ ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ . ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ನಾನು ಭಾರತೀಯ ಎಂದು ಕರೆದುಕೊಳ್ಳಲು ನಾಚಿಕೆಪಡುತ್ತೇನೆ ಏಕೆಂದರೆ ಈ ಸಮಸ್ಯೆ ಕೇವಲ ಮಣಿಪುರಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶದ ತಲೆ ತಗ್ಗಿಸುವಂತಾಗಿದೆ. ಆದ್ದರಿಂದ ಇದನ್ನು ರಾಜಕೀಯಗೊಳಿಸಬಾರದು ಎಂದು ಗಂಭೀರ್ ಹೇಳಿದ್ದಾರೆ.

ಮೇ 4 ರಂದು ಇಬ್ಬರು ಮಹಿಳೆಯರನ್ನು ಇನ್ನೊಂದು ಬದಿಯ ಪುರುಷರ ಗುಂಪಿನಿಂದ ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊದ ನಂತರ ಮಣಿಪುರದ ಬೆಟ್ಟಗಳಲ್ಲಿ ಉದ್ವಿಗ್ನತೆ ಉಂಟಾಗಿದೆ.

ಘಟನೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!