ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮ ಭಕ್ತರಿಗೆ ನೀಡುವುದಿಲ್ಲ: ಬಸವಲಿಂಗ ಸ್ವಾಮೀಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ ಎಂದು ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ನಿನ್ನೆಯಷ್ಟೇ ಕನ್ನೇರಿ ಮಠದ ಸ್ವಾಮೀಜಿಗಳು ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುವುದು, ಚಿತಾಭಸ್ಮ ಬೇಕಾದವರು ಹೆಸರು ನೋಂದಾಯಿಸಿ ಎಂದು ಹೇಳಿದ್ದರು.

ಆದರೆ ಸ್ವಾಮೀಜಿಗಳ ಆಶಯದಂತೆ ನಡೆಯುತ್ತೇವೆ, ಯಾರಿಗೂ ಚಿತಾಭಸ್ಮ ನೀಡುವುದಿಲ್ಲ. ವಿಭೂತಿಯನ್ನು ತಂದು ಅಂತಿಮ ಸಂಸ್ಕಾರ ನೆರವೇರಿಸಿದ ಸ್ಥಳದಲ್ಲಿಟ್ಟು, ಅದನ್ನೇ ತೆಗೆದುಕೊಂಡು ಹೋಗಿ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!