ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷ ನಾಯಕ ಆರ್.ಅಶೋಕ್ ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂ ಅರ್ಪಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ.
ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.