ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿದಕ್ಕೆ ಅಶ್ವತ್ಥ್ ನಾರಾಯಣ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಷರತ್ತು ಹಾಕುತ್ತಿರುವುದು ಏಕೆ ಎಂದುಕಾಂಗ್ರೆಸ್​ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, APL, BPL ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್​ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!