ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಷರತ್ತು ಹಾಕುತ್ತಿರುವುದು ಏಕೆ ಎಂದುಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ, APL, BPL ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ ಎಂದರು.