ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ.ಪುನೀತ್ರಾಜ್ಕುಮಾರ್ಗೆ ಮರೋಣತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್ಕುಮಾರ್ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್ಟಿಆರ್ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ ನಟನಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೊತೆಗೆ ಕಾರ್ಯಕ್ರಮ ಉದ್ದಕ್ಕೂ ವರುಣನ ಸಿಂಚನವಾಯಿತು.