ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಚಿತ್ರ ನಿರ್ದೇಶಕ, ಸಂತೋಷ್ ಆನಂದ್ರಾಮ ಹಾಗೂ ನಟ ಯುವ ರಾಜ್ ಕುಮಾರ್ ಭೇಟಿ ನೀಡಿ ದೇವರ ದರುಶನ ಪಡೆದರು.
ಮಾರ್ಚ್ 29ರಂದು ‘ಯುವ’ ಚಿತ್ರದ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆ ಚಿತ್ರತಂಡದ ಪ್ರಮುಖರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.