ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಎಪಿಎಂಸಿ- ನವನಗರ ಠಾಣೆ ಎಎಸ್ಐಯೊಬ್ಬರು ಗೋಕಾಕನಲ್ಲಿ ನಡೆಯುತ್ತಿದ್ದ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದಾಗ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಎಲ್.ಎಂ. ಮೀರಾನಾಯಕ (54) ಅವರು ಶನಿವಾರ ಬೆಳಗ್ಗೆ 6:30 ಗಂಟೆ ಸುಮಾರಿಗೆ ಗೋಕಾಕಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಬಂದೋಬಸ್ತ್ ಕರ್ತವ್ಯಕ್ಕೆಂದು ಗೋಕಾಕಗೆ ಹೋಗಿದ್ದರು. ಈ ವೇಳೆ ರಾತ್ರಿ ಚೆಕ್ ಪೋಸ್ಟ್ ಕರ್ತವ್ಯ ಮುಗಿಸಿ ಅವರು ವಾಸ್ತವ್ಯವಿದ್ದ ಎಸ್ಸಿ, ಎಸ್ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಮಾಡುತ್ತಿದ್ದಾಗ ತೀವ್ರ ಹೃದಯಾಘಾತದಿಂದ ಮೃಪಟ್ಟಿರುವುದಾಗಿ ತಿಳಿದು ಬಂದಿದೆ.