ಏಷ್ಯಾ ಕಪ್: ಭಾರತ ವಿರುದ್ಧ ಟಾಸ್​​ ಗೆದ್ದ ಶ್ರೀಲಂಕಾ ಬೌಲಿಂಗ್​ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಏಷ್ಯಾ ಕಪ್​ ಟೂರ್ನಿಯ ಸೂಪರ್​ 4 ಹಂತದ ಭಾರತ ವಿರುದ್ಧ ಟಾಸ್​ ಗೆದ್ದ ಶ್ರೀಲಂಕಾ ಬೌಲಿಂಗ್​ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಭಾರತ ಫೈನಲ್​ಗೇರಬೇಕಾದರೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಪಾಕಿಸ್ತಾನ ವಿರುದ್ಧ 5 ವಿಕೆಟ್​ಗಳ ಸೋಲುಂಡ ಬಳಿಕ ಭಾರತದ ಮೇಲೆ ಒತ್ತಡ ಹೆಚ್ಚಿದೆ. ಇದರಿಂದ ಶ್ರೀಲಂಕಾ ವಿರುದ್ಧದ ಈ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಶ್ರೀಲಂಕಾ ಭಾರತದ ವಿರುದ್ಧ ಕಮಾಲ್​ ಮಾಡುವ ಹುಮ್ಮಸ್ಸಿನಲ್ಲಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ರವಿ ಬಿಷ್ಣೋಯ್​ ಬದಲಾಗಿ ಹಿರಿಯ ಸ್ಪಿನ್ನರ್​ ರವಿಚಂದ್ರನ್​ ಅಶ್ವಿನ್​ ಅವರನ್ನು ಸೇರಿಸಿಕೊಳ್ಳಲಾಗಿದೆ. ಪಾಕ್​ ಪಂದ್ಯದಲ್ಲಿ ಕ್ಯಾಚ್​ ಬಿಟ್ಟು ಟೀಕೆಗೆ ಗುರಿಯಾಗಿದ್ದ ಯುವ ಬೌಲರ್​ ಅರ್ಷದೀಪ್​ ಸಿಂಗ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಭಾರತ: ರೋಹಿತ್​ ಶರ್ಮಾ(ನಾಯಕ), ಕೆಎಲ್​ ರಾಹುಲ್​, ವಿರಾಟ್​ ಕೊಹ್ಲಿ, ರಿಷಬ್​ ಪಂತ್​, ಸೂರ್ಯಕುಮಾರ್​ ಯಾದವ್​, ಹಾರ್ದಿಕ್​ ಪಾಂಡ್ಯಾ, ದೀಪಕ್​ ಹೂಡಾ, ಭುವನೇಶ್ವರ್​ ಕುಮಾರ್, ರವಿಚಂದ್ರನ್​ ಅಶ್ವಿನ್​, ಯಜುವೇಂದ್ರ ಚಹಲ್​, ಅರ್ಷದೀಪ್​ ಸಿಂಗ್​.

ಶ್ರೀಲಂಕಾ: ಪಾತುಮ್ ನಿಸ್ಸಂಕ, ಕುಶಾಲ್ ಮೆಂಡಿಸ್, ಚರಿತ ಅಸಲಂಕ, ದನುಷ್ಕ ಗುಣತಿಲಕ, ಬನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್​ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!