ಮಹತ್ವಾಕಾಂಕ್ಷಿ ಗ್ಯಾರೆಂಟಿ ‘ಗೃಹಲಕ್ಷ್ಮಿ’ಗೆ ನಾಳೆ ಚಾಲನೆ: ಮೈಸೂರಿನಲ್ಲಿ ಭರದ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದು ನೂರು ದಿನಗಳು ಕಳೆದಿವೆ. ಗ್ಯಾರೆಂಟಿಗಳಿಂದ ಫೇಮಸ್ ಆಗಿರುವ ಸರ್ಕಾರ ಒಂದೊಂದೆ ಗ್ಯಾರೆಂಟಿಯನ್ನು ಈಡೇರಿಸುತ್ತಾ ಬರುತ್ತಿದೆ.

ಬಹುಮಹತ್ವಾಕಾಂಕ್ಷಿ ಗ್ಯಾರೆಂಟಿ ಗೃಹಲಕ್ಷ್ಮಿಗೆ ನಾಳೆ ಮೈಸೂರಿನಲ್ಲಿ ಚಾಲನೆ ಸಿಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ ಹೂಡಿದ್ದು, ಸಿದ್ಧತೆಗಳನ್ನು ಗಮನಿಸಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.

ಸಾಂಕೇತಿಕವಾಗಿ ಐವರು ಫಲಾನುಭವಿಗಳಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಒಟ್ಟಾರೆ 1 ಲಕ್ಷ 30 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!