ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಶಿವಸಾಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸುಮಾರು 18,000 ಜನರು ಪ್ರವಾಹದಿಂದ ತತ್ತರಿಸಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಪ್ರಕಾರ, ಸುಮಾರು 18,000 ಜನ ಪ್ರವಾಹದಿಂದಾಗಿ ಅಷ್ಟೂ ಜನರ ಬದುಕು ಬೀದಿಗೆ ಬಿದ್ದಿದೆ. ಶಿವಸಾಗರ್ ಜಿಲ್ಲೆಯ ಸುಮಾರು 54 ಹಳ್ಳಿಗಳು ಎರಡು ನದಿಗಳ ನೀರಿನಿಂದ ಜಲಾವೃತವಾಗಿವೆ.
ಜಿಲ್ಲಾಡಳಿತವು 11 ಪರಿಹಾರ ಶಿಬಿರಗಳು ಮತ್ತು 5 ಪರಿಹಾರ ವಿತರಣಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಸುಮಾರು 1,100 ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಅನೇಕ ಪ್ರವಾಹ ಪೀಡಿತ ಗ್ರಾಮಸ್ಥರು ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.
ಪ್ರವಾಹದ ನೀರಿನ ರಭಸಕ್ಕೆ ಮನೆಯ ಎಲ್ಲಾ ವಸ್ತುಗಳು ಹಾಳಾಗಿವೆ ಎಂದು ಸ್ಥಳೀಯರು ಕಣ್ಣೀರು ಹಾಕಿದ್ದಾರೆ.
ಮನೆಗಳು ಪ್ರವಾಹದ ನೀರಿನಿಂದ ಸಂಪೂರ್ಣವಾಗಿ ಮುಳುಗಿದ್ದು, ಎಲ್ಲಾ ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿವೆ ಎಂದು ಸಂತ್ರಸ್ತೆಯೊಬ್ಬರು ಅಳಲು ತೋಡಿಕೊಂಡರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್), ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ನಾಲ್ಕು ದೋಣಿಗಳನ್ನು ರಕ್ಷಣಾ ಕಾರ್ಯಕ್ಕಾಗಿ ಬಳಸಲಾಗಿದೆ.